ಸುಳ್ಯದಲಿ ವೈಭವದ ಅಂಬೇಡ್ಕರ್ ಜಯಂತಿ ಆಚರಣೆ: ಮುಂದೆ ಅಂಬೇಡ್ಕರ್ ಭವನದಲ್ಲೇ ಜಯಂತಿ ಆಚರಿಸುವ ಸಂಕಲ್ಪ

 

ಸುಳ್ಯ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ನಗರ ಪಂಚಾಯತ್‌ಗಳ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು, “ಸುಳ್ಯದಲ್ಲಿ ಅಂಬೇಡ್ಕರ್ ಭವನದ ನಿರ್ಮಾಣ ಕಾರ್ಯವು ಹಲವು ಕಾಲದಿಂದ ನೆನೆಗುದಿಗೆ ಬಿದ್ದಿದೆ. ಮುಂದಿನ ವರ್ಷದ ಜಯಂತಿ ಆಚರಣೆಯ ವೇಳೆಗೆ ಸುಸಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣಗೊಂಡು, ಅಲ್ಲಿಯೇ ಕಾರ್ಯಕ್ರಮ ನಡೆಯುವಂತಾಗಲಿ ಎನ್ನುವುದು ನಮ್ಮೆಲ್ಲರ ಆಶಯ. ಇದಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು,” ಎಂದು ತಿಳಿಸಿದರು.

ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ಅಧ್ಯಕ್ಷರಾದ ಕೆ. ಎಂ. ಮುಸ್ತಫಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸುಬ್ಬಪ್ಪ ಕೈಕಂಬ ಅವರು ಬಾಬಾಸಾಹೇಬರ ಜೀವನ ಮತ್ತು ಸಂದೇಶಗಳ ಕುರಿತು ಸಂಸ್ಮರಣಾ ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಪರಿಶಿಷ್ಟ ಜಾತಿ ವಿಭಾಗದ ವಿದ್ಯಾರ್ಥಿಗಳನ್ನು ಗುರುತಿಸಿ, ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರು ಭಾಗವಹಿಸಿದ್ದರು. ಭರತ್ ಮುಂಡೋಡಿ, ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರು. ಶಾಹುಲ್ ಹಮೀದ್ ಕುತ್ತಮೊಟ್ಟೆ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು. ಎಂ. ಮಂಜುಳ ತಹಶೀಲ್ದಾರ್, ಸುಳ್ಯ. ರಾಜಣ್ಣ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹೆಚ್.ಆರ್. ಬಸವರಾಜು ನಗರ ಪಂಚಾಯತ್ ಮುಖ್ಯಾಧಿಕಾರಿ. ವೈ. ಎಸ್. ಹರಗಿ ಕ್ಷೇತ್ರ ಶಿಕ್ಷಣಾಧಿಕಾರಿ. ಇತರ ಗಣ್ಯರು ಭಾಗವಹಿಸಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣ ಬಿ.ಸ್ವಾಗತಿಸಿದರು.ಶಿವಪ್ರಸಾದ್ ಕೆ.ವಿ. ವಂದನಾರ್ಪಣೆ ಮಾಡಿದರು ಮಮತಾ ಕೆ.ಎಸ್.ಮತ್ತು ಆಶಾ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Discover more from

Subscribe now to keep reading and get access to the full archive.

Continue reading