ಅರಂತೋಡು ಕ್ಲಸ್ಟರ್ ಮಟ್ಟದ ಶಾಲಾ ದಾಖಲಾತಿ ಆಂದೋಲನ ಯಶಸ್ವಿ

ಅರಂತೋಡು ಕ್ಲಸ್ಟರ್ ಮಟ್ಟದ ಸರಕಾರಿ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನವು ಮೇ 20 ರಂದು ಅರಂತೋಡು ಗ್ರಾಮ ಪಂಚಾಯತಿ ವಠಾರದಲ್ಲಿ ಜರುಗಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುರೇಶ್ ಉಳುವಾರು ರವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ ಅವರು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಸಮವಸ್ತ್ರ, ಪುಸ್ತಕ ಹಾಗೂ ಬಿಸಿಯೂಟ ಸೇರಿದಂತೆ ಎಲ್ಲವನ್ನೂ ಉಚಿತವಾಗಿ ನೀಡಲಾಗುತ್ತಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಬೇಕೆಂದು ಕರೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಗೋಪಲಕೃಷ್ಣ ಬನ ಅವರು ಕಾರ್ಯಕ್ರಮದ ಉದ್ದೇಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.


ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೊಷ್ ಕುತ್ತಮೊಟ್ಟೆ ಮತ್ತು ಕೆಡಿಪಿ ಸದಸ್ಯ ಅಶ್ರಫ್ ಗುಂಡಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಮೀರ್ ಕುಕ್ಕುಂಬಳ, ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯೋಪಾಧ್ಯಾಯರು, ಶಾಲಾ ಸಹಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಶಿಕ್ಷಣ ಸಂಯೋಜಕಿ ಮಮತಾ ಅವರು ಎಲ್ಲರಿಗೂ ವಂದಿಸಿದರು. ಅರಂತೋಡು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಅಧ್ಯಾಪಕ ಧನಂಜಯ ಮೇರ್ಕಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Discover more from

Subscribe now to keep reading and get access to the full archive.

Continue reading