ಬೀದರ್: ಮಾವಿನ ಹಣ್ಣು ಸೇವಿಸಿದ ಬೆನ್ನಲ್ಲೇ ಆರೋಗ್ಯದಲ್ಲಿ ಏರುಪೇರಾಗಿ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತಪಟ್ಟ ಬಾಲಕಿಯರು ಭವಾನಿ ವೈಜಿನಾಥ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14) ಎಂದು ತಿಳಿದು ಬಂದಿದೆ.

ಅಸ್ವಸ್ಥಗೊಂಡ ಕುಟುಂಬದ ಸದಸ್ಯರನ್ನು ತಕ್ಷಣವೇ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಾವಿನ ಹಣ್ಣು ಸೇವಿಸಿದ ನಂತರವೇ ಈ ದುರಂತ ಸಂಭವಿಸಿರುವುದರಿಂದ, ಹಣ್ಣಿನಲ್ಲಿ ವಿಷಕಾರಿ ಅಂಶವಿತ್ತೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.



