ಕೆ.ಪಿ.ಸಿ.ಸಿ.ಅಧ್ಯಕ್ಷರಾಗಿ ಆಯ್ಕೆಯಾಗಿ ಇದೀಗ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾಗಿ ಚುನಾಯಿತರಾದ ಶ್ರೀಯುತ ಬಿ.ಕೆ.ಹರಿಪ್ರಸಾದ್ ಅವರನ್ನು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾಗಿ ಚುನಾಯಿತರಾದ ಶ್ರೀಯುತ ಪಿ.ವಿ.ಮೋಹನ್ ಅವರನ್ನು ಕೆ.ಪಿ.ಸಿ.ಸಿ.ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾದ ಕೆ.ಪಿ.ಜಾನಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಕುಂಞಿ ಗೂನಡ್ಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು.


