ಕೆಪಿಸಿಸಿ ಪ್ರಚಾರ ಸಮಿತಿ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ತೆರಳಿದ ಸಂದರ್ಭದಲ್ಲಿ ಸುಳ್ಯದ ಕಾಂಗ್ರೆಸ್ ನಾಯಕರು ಕರ್ನಾಟಕ ಸರಕಾರದ ನೂತನ ಆರೋಗ್ಯ ಸಚಿವರಾದ ಯು ಟಿ ಖಾದರ್ ರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ವಿಚಾರ ಸಂಕಿರಣಕ್ಕೆ ತೆರಳಿದ ತಂಡದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾದ ಕೆ. ಪಿ. ಜಾನಿ, ದ. ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಮುಂಡೋಡಿ ಮತ್ತು ಪ್ರಚಾರ ಸಮಿತಿಯ ಅಶ್ರಫ್ ಸಾಹುಕಾರ್ ಇದ್ದರು.







