ಕುಂಬ್ರ : ಸಾರೆಪುಣಿಯ ಮೃತ ನಿಶಾನಳ ಮನೆಗೆ ಎಸ್ಸೆಸ್ಸಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡಿದರು. ಅಲ್ಲಿಂದಲೇ ಆರೋಗ್ಯ ಸಚಿವ ಯು.ಟಿ ಖಾದರ್ ನನ್ನು ಸಂಪರ್ಕಿಸಿ ನಿಶಾನ ಳ ಮರಣದ ಕುರಿತು ಪಾರದರ್ಶಕ ತನಿಖೆ ನಡೆಸಿ, ಕುಟುಂಬಕ್ಕೆ ತ್ವರಿತ ನ್ಯಾಯ ಒದಗಿಸಿಕೊಡಲು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಘಟನಾ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.