ಮಾಣಿ : ದ.ಕ.ಜಿ.ಪ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಇದರ ಆಶ್ರಯದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಎಸ್,ಡಿ,ಎಂ,ಸಿ ಅಧ್ಯಕ್ಷರಾದ ಶ್ರೀ ಇಬ್ರಾಹಿಂ ಹಳೀರ ರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಹೋರಾಟದ ವಿಷಯದಲ್ಲಿ ಮಾತನಾಡಿದರು,ಮುಖ್ಯ ಅತಿಥಿಗಳಾಗಿ ಮಾಣಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುದೀಪ್ ಕುಮಾರ್ ಶೆಟ್ಟಿ,ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಆಳ್ವ,ನಿವೃತ್ತ ಸೈನಿಕರಾದ ಶ್ರೀ ಜಗನ್ನಾಥ ಶೆಟ್ಟಿ,ಮತ್ತು SDMC ಯ ಎಲ್ಲಾ ಸದಸ್ಯರು ಹಾಗೂ ಊರಿನ ಇತರ ಸಂಘ ಸಂಸ್ಥೆಗಳ ಸದಸ್ಯರು ಗಳು,ಮುಖ್ಯ ಶಿಕ್ಷಕಿ ಶ್ರೀಮತಿ ಚಂದ್ರಾವತಿ,ಮತ್ತು ಇತರ ಶಿಕ್ಷಕರು, ಅಡುಗೆ ಸಿಬ್ಬಂದಿಗಳು,ವಿದ್ಯಾರ್ಥಿಗಳ ಪೋಷಕರು ಸಹಿತ ಊರಿನ ಪ್ರಮುಖರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು,ಶಾಲಾ ವಿದ್ಯಾರ್ಥಿಗಳಿಂದ ಭಾಷಣ,ದೇಶಭಕ್ತಿ ಗೀತೆ, ಸಮೂಹ ಗಾಯನ,ಆಕರ್ಷಕ ಪಥ ಸಂಚಲನ ಇನ್ನಿತರ ಕಾರ್ಯಕ್ರಮಗಳು ಜರುಗಿದವು,ವಿದ್ಯಾರ್ಥಿಗಳಿಗೆ ಸಿಹಿತಿಂಡಿ,ಸಿಹಿಯೂಟ ನೀಡಲಾಯಿತು
ಶಿಕ್ಷಕಿ ಅಮೃತಾ ಎಸ್ ಜೋಶಿ ಸ್ವಾಗತಿಸಿದರು, ಶಾಲಾ ಸಹಶಿಕ್ಷಕಿ ಪ್ರಮೀಳಾ ಪಿ ಕಾರ್ಯಕ್ರಮ ನಿರೂಪಿಸಿದರು,ದೈಹಿಕ ಶಿಕ್ಷಕಿ ಉಷಾ ,ಎ ಧನ್ಯವಾದ ಸಮರ್ಪಿಸಿದರು.